25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

ಮಚ್ಚಿನ: ಬ್ಯಾಂಬೂ ಸೊಸೈಟಿ ಆಪ್ ಇಂಡಿಯಾ ಬಿದಿರು ಗ್ರಾಮಗಳ ಕ್ಲಸ್ಟರ್ ಯೋಜನೆ ಹಾಗೂ ಬೆಳ್ತಂಗಡಿ ರಬ್ಬರ್ ಸೊಸೈಟಿ ಹಾಗೂ ಶ್ರೀ ಕ್ಷೇ ಧ. ಗ್ರಾ. ಯೋ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಸಹಕಾರದೊಂದಿಗೆ 1250 ಬಿದಿರು ಗಿಡ ವಿತರಣೆ ಕಾರ್ಯಕ್ರಮ ನಡೆಯಿತು.

ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ, ದೇವಸ್ಥಾನ ಗುಮಾಸ್ತ ಬಾಲಕೃಷ್ಣ ಭಟ್ ಹಾಗೂ ಸುಧೀರ್ ಕುಮಾರ್ ಶೆಟ್ಟಿ (ಕೋರ ಬಿಟ್ಟು ಮನೆ) ಅವರಿಗೆ ಬಿದಿರು ಗಿಡವನ್ನು ಕೃಷಿ ವಿಭಾಗದ ಯೋಜನಾಧಿಕಾರಿ ಬಾಲಕೃಷ್ಣ ರವರು ವಿತರಣೆ ಮಾಡಿದರು.

ಬಿದಿರು ಬ್ಯಾಂಬೂ ಸೊಸೈಟಿಯ ಮೇಲ್ವಿಚಾರಕ ಕುಮಾರನಾಥ್ ಬಿದಿರು ಕೃಷಿ ಬಗ್ಗೆ ಮಾತನಾಡಿ ಬಿದಿರು ವೇಗವಾಗಿ ಬೆಳೆಯುವ ಕೃಷಿಯಾಗಿದೆ ಬಿದಿರಿನ ಬಹುಮುಖ ಉಪಯೋಗಗಳು ನಿರ್ಮಾಣ ಕಟ್ಟಡದ ಒಳಾಂಗಣ ಅಲಂಕಾರಕ್ಕಾಗಿ, ಪೀಠೋಪಕರಣಗಳ ತಯಾರಿಕೆಗಾಗಿ ಅಗರಬತ್ತಿ ತಯಾರಿಕೆಗೆ ಕಾಗದ ತಯಾರಿಕೆಗೆ ಅತಿ ಹೆಚ್ಚು ಉಪಯೋಗವಾಗುತ್ತದೆ ಬಿದಿರು ಗಿಡ ನಾಟಿ ಮಾಡುವ ವಿಧಾನ ಬಳಸಬೇಕಾದ ಗೊಬ್ಬರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು

ಕಾರ್ಯಕ್ರಮದಲ್ಲಿ ಮಡಂತ್ಯಾರ್ ವಲಯದ ಮೇಲ್ವಿಚಾರಕ ಕೇಶವ ನಾಯ್ಕ, ಒಕ್ಕೂಟದ ಅಧ್ಯಕ್ಷವಿಜಯ್ ಮಡಕ್ಕಿಲ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸುಧಾ, ಕೃಷಿ ಮೇಲ್ವಿಚಾರಕ ಕೃಷ್ಣ, ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ, ಕುದ್ರಡ್ಕ ಸೇವಾ ಪ್ರತಿನಿಧಿ ಶ್ರೀಮತಿ ನಂದಿನಿ, ಶೌರ್ಯ ಘಟಕದ ಪ್ರತಿನಿಧಿ ಪ್ರಭಾಕರ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya
error: Content is protected !!