ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಬೆಳ್ತಂಗಡಿ ಯಕ್ಷ ಸಂಭ್ರಮ ಮತ್ತು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ನೇತೃತ್ವದಲ್ಲಿ ಮಹಿಳಾ ಯಕ್ಷ ಸಂಭ್ರಮದ ಉದ್ಘಾಟನೆಯು ಆ.2ರಂದು ಉಜಿರೆ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಯು. ಶರತ್ ಕೃಷ್ಣ ಪಡ್ವೆಟ್ನಾಯ ರವರು ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನೆಯನ್ನು ನೆರವೇರಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಬೆಳಿಗ್ಗೆ 10ರಿಂದ ಪ್ರಾರಂಭವಾದ ಚೌಕಿ ಪೂಜೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದು ಶುಭಹಾರೈಸಿದರು. ಬಳಿಕ ಮಂಗಳೂರು ಮಹಾದೇವ ಯಕ್ಷ ಕಲಾ ತಂಡ ದಿಂದ ಪೂರ್ವರಂಗ, ಯಕ್ಷ ಕಲಾ ಸಂಗಮದಿಂದ ಅಬ್ಬರದ ಚೆಂಡೆ ನಡೆಯಿತು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಯಕ್ಷಗಾನ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ. ನಾಗೇಶ್ ಕುಮಾರ್ ಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಮಿತಾ, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟರ್ ನಮ್ರತಾ ಎನ್., ಉಜಿರೆ ಸಹಕಾರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಉದ್ಯಮಿ ಮೋಹನ ಶೆಟ್ಟಿಗಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ರಾಘವ ಹೆಚ್. ರಾಜೇಶ್ ಕುಳಾಯಿ, ಗುರುರಾಜ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ, ರಾಜೇಂದ್ರ ಎಕ್ಕಾರ್ ನಿರೂಪಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
error: Content is protected !!