July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ರೋಟರಿ ಕ್ಲಬ್ ಬೆಳ್ತಂಗಡಿ, ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಆಯೋಜಿಸಲ್ಪಟ್ಟ “ಹಸಿರೇ ಉಸಿರು” ಏಕ್ ಪೆಡ್ ಮಾ ಕೆ ನಾಮ್
1000 ಸಸಿಗಳ ವಿತರಣೆ ಮತ್ತು ನೆಡುವಿಕೆ ಕಾರ್ಯಕ್ರಮವು ಉಜಿರೆ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ನೆರವೇರಿಸಿದರು.

ಅಧ್ಯಕ್ಷತೆಯನ್ನು ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಕಾಶ್ ಪ್ರಭು, ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಇದರ ಸಂಯೋಜಕ ಮೋಹನ್ ಕುಮಾರ್ ಕೆ., ಬೆಳ್ತಂಗಡಿ ಡಿಆರ್ ಎಫ್ ಓ ಕಿರಣ್ ಪಾಟೀಲ್, ಎನ್ಎಸ್ಎಸ್ ಕಾರ್ಯಕ್ರಮ ಸಹ ಯೋಜನಾಧಿಕಾರಿ ಮಾಲಿನಿ ಅಂಚನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಗಿಡ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬೀಟ್ ಫಾರೆಸ್ಟ್ ಪರಮೇಶ್ವರ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಎಸ್ ಡಿ ಎಂ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ನಾಯಕರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

ಸ್ವಯಂ ಸೇವಕರು ಪ್ರಾರ್ಥಿಸಿದರು . ರಾಷ್ಟೀಯ ಸೇವಾ ಯೋಜನೆ ಯೋಜನಾಧಿಕಾರಿ ಮಹೇಶ್ ಕುಮಾರ್ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು.

Related posts

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
error: Content is protected !!