March 7, 2026
ವರದಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಪ್ರಾಪ್ತಿ 10ನೇ , ಅತಿಥಿ ಸ್ಥಾನವನ್ನು ವಿನೀತ್ ಹತ್ತನೇ ಮತ್ತು ಮುಖ್ಯ ಅತಿಥಿ ಸ್ಥಾನವನ್ನು ಸಂಜನ 9ನೇ ತರಗತಿ ಇವರು ವಹಿಸಿಕೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಅಧ್ಯಕ್ಷರು ಮತ್ತು ಅತಿಥಿಗಳು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚೆನ್ನೆಮಣೆ ಆಟವನ್ನು ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ತುಳುನಾಡಿನ ವೈಶಿಷ್ಟ್ಯತೆಗಳನ್ನು ಬಹಳ ಸವಿಸ್ತಾರವಾಗಿ ಎಲ್ಲರ ಮನಮುಟ್ಟುವಂತೆ ಮುಖ್ಯ ಅತಿಥಿಗಳು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ಅತಿಥಿಗಳು ಮತ್ತು ಅಧ್ಯಕ್ಷರು ತಮ್ಮ ಭಾಷಣದ ಮೂಲಕ ಆಟಿಗೆ ಸಂಬಂಧಿಸಿದ ತಮ್ಮ ಅನುಭವಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಯಶ್ವಿತಾ, ಸ್ವಾಗತ ಭಾಷಣವನ್ನು ಪ್ರಶ್ಯ ಮತ್ತು ವಂದನಾರ್ಪಣೆಯನ್ನು ಸ್ಪಂದನ್ ಇವರು ನೆರವೇರಿಸಿದರು.

ಶಾಲಾ ಮಕ್ಕಳಿಂದ ತುಳು ನಾಡಿನ ಸಂಸ್ಕೃತಿಗಳನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ಪರಿಚಯಿಸಿ ಹಂಚಲಾಯಿತು. ಆಟಿಗೆ ಸಂಬಂಧಿಸಿದ ವಿವಿಧ ರೀತಿಯ ಬಿತ್ತಿ ಪತ್ರಿಕೆಗಳನ್ನು ಮಕ್ಕಳಿಂದ ತಯಾರಿಸಲಾಯಿತು. ಚೆನ್ನೆ ಮಣೆ ಆಟವನ್ನು ಪರಿಚಯಿಸಿ ಮಕ್ಕಳಿಂದ ಆಡಿಸಲಾಯಿತು. ಶಾಲಾ ಎಲ್ಲಾ ಮಕ್ಕಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!