25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya
error: Content is protected !!