July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಮದ್ರಾಸ್, ವಾರಣಾಸಿಯ ಐಐಟಿಗೆ ಪ್ರವೇಶ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya
error: Content is protected !!