September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!