25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು.

ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ 108 ತೆಂಗಿನಕಾಯಿ ಗಣಹೋಮದ ಕೂಪನನ್ನು ಗಣೇಶೋತ್ಸವ ಸಮಿತಿಯ ಗೌರಾವಾಧ್ಯಕ್ಷ ಡಾ| ಶಾಂತಿ ಪ್ರಸಾದ್ ನಮನ ಕ್ಲಿನಿಕ್ ಇವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಫಲ್ಗುಣಿ ಸಂಘದ ಅಧ್ಯಕ್ಷ ವಿ. ಎಸ್ ಜಯರಾಜ್‌ರವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ್ ಪೈ, ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಕಾರ್ಯದರ್ಶಿ ಪ್ರಶಾಂತ್ ಹೆಗ್ಡೆ ಕುಂಟಲ್ಮಾರು ಮತ್ತು ಸುದೀಪ್ ಪಟವರ್ಧನ್, ಕೋಶಾಧಿಕಾರಿ ಶ್ರೀಕಾಂತ್ ಉಡುಪ ಹಾಗೂ ಜಂಟಿ ಸಮಿತಿಗಳ ಎಲ್ಲಾ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ ಮತ್ತು ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ವೇಣೂರಿನ ಎಲ್ಲಾ ವ್ಯಾಪಾರಸ್ಥರು ತಮ್ಮ ಸಂಸ್ಥೆಗಳು, ಮನೆಗಳನ್ನು ವಿಧ್ಯುದ್ದೀಪಾಲಂಕಾರದಿಂದ ವೇಣೂರು ನಗರವನ್ನು ಕಂಗೊಳಿಸಿ 25ನೇ ವರ್ಷದ ಗಣೇಶೋತ್ಸವವನ್ನು ವೇಣೂರಿನ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಯಿತು.

Related posts

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!