September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು.

ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ 108 ತೆಂಗಿನಕಾಯಿ ಗಣಹೋಮದ ಕೂಪನನ್ನು ಗಣೇಶೋತ್ಸವ ಸಮಿತಿಯ ಗೌರಾವಾಧ್ಯಕ್ಷ ಡಾ| ಶಾಂತಿ ಪ್ರಸಾದ್ ನಮನ ಕ್ಲಿನಿಕ್ ಇವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಫಲ್ಗುಣಿ ಸಂಘದ ಅಧ್ಯಕ್ಷ ವಿ. ಎಸ್ ಜಯರಾಜ್‌ರವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ್ ಪೈ, ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಕಾರ್ಯದರ್ಶಿ ಪ್ರಶಾಂತ್ ಹೆಗ್ಡೆ ಕುಂಟಲ್ಮಾರು ಮತ್ತು ಸುದೀಪ್ ಪಟವರ್ಧನ್, ಕೋಶಾಧಿಕಾರಿ ಶ್ರೀಕಾಂತ್ ಉಡುಪ ಹಾಗೂ ಜಂಟಿ ಸಮಿತಿಗಳ ಎಲ್ಲಾ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ ಮತ್ತು ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ವೇಣೂರಿನ ಎಲ್ಲಾ ವ್ಯಾಪಾರಸ್ಥರು ತಮ್ಮ ಸಂಸ್ಥೆಗಳು, ಮನೆಗಳನ್ನು ವಿಧ್ಯುದ್ದೀಪಾಲಂಕಾರದಿಂದ ವೇಣೂರು ನಗರವನ್ನು ಕಂಗೊಳಿಸಿ 25ನೇ ವರ್ಷದ ಗಣೇಶೋತ್ಸವವನ್ನು ವೇಣೂರಿನ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಯಿತು.

Related posts

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!