30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya
error: Content is protected !!