July 23, 2026
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಆಟಿಡೊಂಜಿ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆ ತುಳುನಾಡಿನ ವೈಭವವನ್ನು ಹೆಸರಿಸುವಂತೆ ಅಲಂಕಾರಗೊಳಿಸಲಾಗಿತ್ತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾಕರ ಕೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ತುಳುನಾಡಿನ ನಾಡು ನುಡಿ ಸಂಸ್ಕೃತಿ ಆಚಾರ ವಿಚಾರ ಅದರ ಹಿಂದಿರುವ ವೈಜ್ಞಾನಿಕ ತತ್ವಗಳನ್ನು ಆಧಾರ ಸಹಿತ ವಿವರಿಸಿದರು.ಹಲವಾರು ತುಳು ಪದ್ಯಗಳನ್ನು ಹಾಡಿ ತುಳು ಜನಪದ ಹಾಡುಗಳನ್ನು ಹಾಡಿ ತುಳುನಾಡಿನ ಜನ ಜೀವನವನ್ನು ವಿವರಿಸಿದರು.ಬಳಿಕ ಮಾತನಾಡಿದ ಶಾಲಾ ಸಂಚಾಲಕರು ಪಾರ್ಟಿ ತಿಂಗಳ ತಿಂಡಿ ತಿನಿಸುಗಳ ಮಹತ್ವದ ಬಗೆಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರು ಶಾಲೆಯಲ್ಲಿ ಆಟಿ ದಿನಾಚರಣೆಯ ಅಗತ್ಯತೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಶಾಲೆಯಲ್ಲಿ ಔಷಧೀಯ ಸಸ್ಯಗಳ ಪ್ರದರ್ಶನ, ಆಟಿ ತಿಂಗಳಲ್ಲಿ ಆಡುವಂತಹ ಆಟಗಳು, ತುಳು ಭಾಷೆಗಳ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಬಿತ್ತಿ ಪತ್ರಿಕೆ ಸಂಘವು ಆಟಿಗೆ ಸಂಬಂಧಿಸಿದಂತಹ ಬಿತ್ತಿ ಪತ್ರಿಕೆಯ ತಯಾರಿಯ ಸ್ಪರ್ಧೆಯನ್ನು ಏರ್ಪಡಿಸಿದ್ದು ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳು ತುಳು ಗಾದೆ ಒಗಟು ನೃತ್ಯ ಹಾಡು, ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಮನರಂಜಿಸಿದರು. ಶಾಲಾ ವಿದ್ಯಾರ್ಥಿಗಳಾದ ತನ್ಮಯ್ ಹಾಗೂ ಅಮೀತ್ ಅವರ ನಿರೂಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದ ಭಾಗಿಯಾಗಿದ್ದರು.

Related posts

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
error: Content is protected !!