23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2023 ಹಾಗೂ 24 ರ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಹದಿನೇಳು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಬಂದಿದ್ದು, ಒಟ್ಟು ಒಂದು ಲಕ್ಷದ ಎರಡು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!