September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

ಉಜಿರೆ: ಶಾಲಾ ಅಥವಾ ಕಾಲೇಜು ಹಂತದಲ್ಲಿ ಸ್ಕೌಟ್ ಗೈಡ್ ಶಿಕ್ಷಣವು ಕೇವಲ ತೋರಿಕೆಗೆ ಸೀಮಿತವಾಗಿರದೇ ನಮ್ಮ ವ್ಯಕ್ತಿತ್ವದ ವಿಕಸನಕ್ಕೆ ದಾರಿ ದೀಪವಾಗಿದೆ ಎಂದು ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನ ಭೌತ ಶಾಸ್ತ್ರ ಮುಖ್ಯಸ್ಥ ಮತ್ತು ಈ ಹಿಂದೆ ಕಾಲೇಜಿನಲ್ಲಿ ರೋವರ್‌ ಸ್ಕೌಟ್‌ ಲೀಡರ್‌ ಆಗಿ ಕರ್ತವ್ಯ ನಿರ್ವಹಿಸಿದ್ದ ತಿರುಮಲ ಪ್ರಸಾದ ಸಿ ಹೆಚ್. ಹೇಳಿದರು.

ಅವರು ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ಸ್ಕೌಟ್-ಗೈಡ್ ದಳದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಸ್ಕಾರ್ಫ್ ದಿನಾಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸ್ಕಾರ್ಫ್ ನ ಮಹತ್ವ ಮತ್ತು ಅದನ್ನು ಧರಿಸಿದಾಗ ಸ್ಕೌಟ್-ಗೈಡ್ ವಿದ್ಯಾರ್ಥಿಗಳಲ್ಲಿ ಸದಾ ಶಿಸ್ತು, ಸಮಯ ಪ್ರಜ್ಞೆ, ವಿಶ್ವ ಭ್ರಾತೃತ್ವದಂತಹ ಉದಾತ್ತ ಗುಣಗಳು ನಮ್ಮಲ್ಲಿ ಬೆಳೆಯುವಂತೆ ಪ್ರೇರೇಪಣೆ ಮಾಡುವಂತಾಗಲಿ.ಉತ್ತಮ ಪೌರತ್ವ ಮತ್ತು ಮಾನವೀಯ ಮೌಲ್ಯಗಳ ಬೆಳೆವಣಿಗೆಗೆ ಸ್ಕೌಟ್ ಗೈಡ್ ಶಿಕ್ಷಣವು ಉಪಕಾರಿಯಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳಕ್ಕೆ ನೂತನವಾಗಿ ಸೇರಿರುವ ಪ್ರಥಮ ಪಿ ಯು ಸಿ ಯ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸ್ಕಾರ್ಫ್ ತೊಡಿಸಿ ವಿಶ್ವ ಸ್ಕೌಟ್ ಕುಟುಂಬದೊಂದಿಗಿನ ಅವರ ಹೊಸ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ಸ್ಕಾರ್ಫ್ ಧರಿಸಿ ಈ ವಿಶೇಷ ದಿನವನ್ನು ಸಂಭ್ರಮದಿಂದ ಆಚರಿಸಿದರು.

ವೇದಿಕೆಯ ಮೇಲೆ ಉಪಸ್ಥಿತರಿದ್ದ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ ದಳನಾಯಕರುಗಳಾದ ಲಕ್ಷ್ಮೀಶ್‌ ಭಟ್‌ ಮತ್ತು ಅಂಕಿತಾ ಎಂ.ಕೆ. ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ರೋವರ್ಸ್‌ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳಿಂದಲೇ ಆಯೋಜಿಸುವಲ್ಲಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿ ವಿನೂತನವಾಗಿ ಆಚರಿಸುವಲ್ಲಿ ಅಗತ್ಯ ಸಹಕಾರ ನೀಡಿದರು.
ರೋವರ್‌ ವಿದ್ಯಾರ್ಥಿಗಳಾದ ಸಮೃದ್ಧ್‌ ಜೈನ್‌ ಸ್ವಾಗತಿಸಿ, ವಿಶಾನ್‌ ವಂದಿಸಿ, ಪವನ್‌ ಬಿ ಪಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya
error: Content is protected !!