September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

ಉಜಿರೆ: ಶಾಲಾ ಅಥವಾ ಕಾಲೇಜು ಹಂತದಲ್ಲಿ ಸ್ಕೌಟ್ ಗೈಡ್ ಶಿಕ್ಷಣವು ಕೇವಲ ತೋರಿಕೆಗೆ ಸೀಮಿತವಾಗಿರದೇ ನಮ್ಮ ವ್ಯಕ್ತಿತ್ವದ ವಿಕಸನಕ್ಕೆ ದಾರಿ ದೀಪವಾಗಿದೆ ಎಂದು ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನ ಭೌತ ಶಾಸ್ತ್ರ ಮುಖ್ಯಸ್ಥ ಮತ್ತು ಈ ಹಿಂದೆ ಕಾಲೇಜಿನಲ್ಲಿ ರೋವರ್‌ ಸ್ಕೌಟ್‌ ಲೀಡರ್‌ ಆಗಿ ಕರ್ತವ್ಯ ನಿರ್ವಹಿಸಿದ್ದ ತಿರುಮಲ ಪ್ರಸಾದ ಸಿ ಹೆಚ್. ಹೇಳಿದರು.

ಅವರು ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ಸ್ಕೌಟ್-ಗೈಡ್ ದಳದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಸ್ಕಾರ್ಫ್ ದಿನಾಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸ್ಕಾರ್ಫ್ ನ ಮಹತ್ವ ಮತ್ತು ಅದನ್ನು ಧರಿಸಿದಾಗ ಸ್ಕೌಟ್-ಗೈಡ್ ವಿದ್ಯಾರ್ಥಿಗಳಲ್ಲಿ ಸದಾ ಶಿಸ್ತು, ಸಮಯ ಪ್ರಜ್ಞೆ, ವಿಶ್ವ ಭ್ರಾತೃತ್ವದಂತಹ ಉದಾತ್ತ ಗುಣಗಳು ನಮ್ಮಲ್ಲಿ ಬೆಳೆಯುವಂತೆ ಪ್ರೇರೇಪಣೆ ಮಾಡುವಂತಾಗಲಿ.ಉತ್ತಮ ಪೌರತ್ವ ಮತ್ತು ಮಾನವೀಯ ಮೌಲ್ಯಗಳ ಬೆಳೆವಣಿಗೆಗೆ ಸ್ಕೌಟ್ ಗೈಡ್ ಶಿಕ್ಷಣವು ಉಪಕಾರಿಯಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳಕ್ಕೆ ನೂತನವಾಗಿ ಸೇರಿರುವ ಪ್ರಥಮ ಪಿ ಯು ಸಿ ಯ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸ್ಕಾರ್ಫ್ ತೊಡಿಸಿ ವಿಶ್ವ ಸ್ಕೌಟ್ ಕುಟುಂಬದೊಂದಿಗಿನ ಅವರ ಹೊಸ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ಸ್ಕಾರ್ಫ್ ಧರಿಸಿ ಈ ವಿಶೇಷ ದಿನವನ್ನು ಸಂಭ್ರಮದಿಂದ ಆಚರಿಸಿದರು.

ವೇದಿಕೆಯ ಮೇಲೆ ಉಪಸ್ಥಿತರಿದ್ದ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ ದಳನಾಯಕರುಗಳಾದ ಲಕ್ಷ್ಮೀಶ್‌ ಭಟ್‌ ಮತ್ತು ಅಂಕಿತಾ ಎಂ.ಕೆ. ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ರೋವರ್ಸ್‌ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳಿಂದಲೇ ಆಯೋಜಿಸುವಲ್ಲಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿ ವಿನೂತನವಾಗಿ ಆಚರಿಸುವಲ್ಲಿ ಅಗತ್ಯ ಸಹಕಾರ ನೀಡಿದರು.
ರೋವರ್‌ ವಿದ್ಯಾರ್ಥಿಗಳಾದ ಸಮೃದ್ಧ್‌ ಜೈನ್‌ ಸ್ವಾಗತಿಸಿ, ವಿಶಾನ್‌ ವಂದಿಸಿ, ಪವನ್‌ ಬಿ ಪಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya
error: Content is protected !!