24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆಗೈದ ವಂ.ಡಾ. ಆಲ್ವಿನ್ ಸೆರಾವೋ ರವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಸ್ವಾ. ಜೆರೋಮ್ ಡಿ’ಸೋಜ ಅವರು ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರ ಸರಳತೆ, ಮಾನವೀಯ ಗುಣಗಳನ್ನು ಪ್ರಶಂಸಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಸ್ವಾ. ವಾಲ್ಟರ್ ಡಿ’ಮೆಲ್ಲೊ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲ ಸಂತೋಷ್ ಸಲ್ದಾನ, ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ಸಿಸ್ಟೆರ್ ಪ್ರೆಸಿಲ್ಲಾ ಅಂದ್ರಾದೆ, ನಾರಾವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ತುಳುಪುಳೆ, ಸಂತಪಾವ್ಲರ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯಸ್ಥ ರಿಚರ್ಡ್ ಮೋರಸ್, ಸಂತಾಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳಂಜ ಪ್ರಾಂಶುಪಾಲರೊಂದಿಗಿನ ಒಡನಾಟವನ್ನು ಹಂಚಿಕೊಂಡರು. ಪೋಷಕರ ಪರವಾಗಿ ಶ್ರೀರಂಗಮಯ್ಯ ಮಾತನಾಡಿದರು. ಉಪಪ್ರಾಂಶುಪಾಲ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಸೋನಿಯಾ ಡಿ’ಸೋಜಾ ವಂದಿಸಿದರು. ಪದವಿ ಕಾಲೇಜಿನ ಉಪನ್ಯಾಸಕ ಅವಿಲ್ ಮೋರಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಹಕಾರವಿತ್ತರು.

Related posts

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!