July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಳ್ತಂಗಡಿ ಘಟಕ ಇವುಗಳ ಆಶ್ರಯದಲ್ಲಿ ಜು.31 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕತರ ಉಪನ್ಯಾಸಮಾಲೆ – 3 ಇದರ ಅಡಿಯಲ್ಲಿ ಶಿವರಾಮ ಕಾರಂತರ ಸ್ಮರಣೆ ಕಾರ್ಯಕ್ರಮ ನಡೆಯಿತು.

ಪ್ರಧಾನ ಭಾಷಣಕಾರರಾಗಿ ಎಸ್ ಡಿ ಎಂ ಕಾಲೇಜು ಉಪನ್ಯಾಸಕ ಡಾ. ರಾಜೇಶ್ ಆಗಮಿಸಿ ಕಾರಂತರ ಬದುಕಿನ ವಿವಿಧ ಮಜಲುಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಹಿರಿಯ ಉಪನ್ಯಾಸಕರಾದ ಆನಂದ ಡಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಡಾ. ಗಣೇಶ್ ಭಟ್ ಹಾಗೂ ಡಾ. ಅಮೃತ ರಶ್ಮಿ ಕಾರ್ಯಕ್ರಮ ಸಂಯೋಜಿಸಿದರು. ಮನ್ವಿತಾ ಮತ್ತು ತಂಡದಿಂದ ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಕುಮಾರಿ ರಕ್ಷಾ ನಿರೂಪಿಸಿ, ಕುಮಾರಿ ಸಮಿತ ಸ್ವಾಗತಿಸಿ ಧನುಶ್ರೀ ವಂದನಾರ್ಪಣೆ ಗೈದರು.

Related posts

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya
error: Content is protected !!