25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya
error: Content is protected !!