22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya
error: Content is protected !!