23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya
error: Content is protected !!