22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು.

ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ 108 ತೆಂಗಿನಕಾಯಿ ಗಣಹೋಮದ ಕೂಪನನ್ನು ಗಣೇಶೋತ್ಸವ ಸಮಿತಿಯ ಗೌರಾವಾಧ್ಯಕ್ಷ ಡಾ| ಶಾಂತಿ ಪ್ರಸಾದ್ ನಮನ ಕ್ಲಿನಿಕ್ ಇವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಫಲ್ಗುಣಿ ಸಂಘದ ಅಧ್ಯಕ್ಷ ವಿ. ಎಸ್ ಜಯರಾಜ್‌ರವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ್ ಪೈ, ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಕಾರ್ಯದರ್ಶಿ ಪ್ರಶಾಂತ್ ಹೆಗ್ಡೆ ಕುಂಟಲ್ಮಾರು ಮತ್ತು ಸುದೀಪ್ ಪಟವರ್ಧನ್, ಕೋಶಾಧಿಕಾರಿ ಶ್ರೀಕಾಂತ್ ಉಡುಪ ಹಾಗೂ ಜಂಟಿ ಸಮಿತಿಗಳ ಎಲ್ಲಾ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ ಮತ್ತು ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ವೇಣೂರಿನ ಎಲ್ಲಾ ವ್ಯಾಪಾರಸ್ಥರು ತಮ್ಮ ಸಂಸ್ಥೆಗಳು, ಮನೆಗಳನ್ನು ವಿಧ್ಯುದ್ದೀಪಾಲಂಕಾರದಿಂದ ವೇಣೂರು ನಗರವನ್ನು ಕಂಗೊಳಿಸಿ 25ನೇ ವರ್ಷದ ಗಣೇಶೋತ್ಸವವನ್ನು ವೇಣೂರಿನ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಯಿತು.

Related posts

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya
error: Content is protected !!