25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
error: Content is protected !!