September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya
error: Content is protected !!