September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಹೊಸಂಗಡಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ, ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಶ್ರೀರಾಮ ದಾಸ ಆಶ್ರನ್ನ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪಡ್ಯಾರ ಬೇಟ್ಟು ಅನುವಂಶಿಯ ಆಡಳಿತದಾರರಾದ ಎ ಜೀವಂದರ್ ಕುಮಾರ್ ರವರು ಸಭಾ ಅಧ್ಯಕ್ಷತೆಯನ್ನು ವಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯ ಉದ್ದೇಶ ಹಾಗೂ ಅದರಿಂದ ಆಗಿರುವಂತಹ ಸಾಮಾಜಿಕ ಬದಲಾವಣೆಯ ಬಗ್ಗೆ ಹಾಗೂ ಪೂಜ್ಯರು ಜನರಿಗೆ ಕೊಟ್ಟಿರುವ ಸಹಕಾರದ ಬಗ್ಗೆ ಮನನ ಮಾಡಿದರು.

ಧಾರ್ಮಿಕ ಉಪನ್ಯಾಸಕಿ ಶ್ರೀಮತಿ ಅನಿತಾ ಶೆಟ್ಟಿ ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಅದರ ಆಚರಣೆಯಿಂದ ಆಗುವ ಬದಲಾವಣೆಯ ಬಗ್ಗೆ ಮಹಿಳೆಯರಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು

ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಆನಂದ ಬಂಗೇರ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ವಸಂತಿ ಹಾಗೂ ಒಕ್ಕೂಟದ ಅಧ್ಯಕ್ಷ ರೋಹಿತ್ ಹಾಗೂ ದಿನಕರ್ ಉಪಸ್ಥಿತರಿದ್ದರು . ಮೇಲ್ವಿಚಾರಕಿ ಶ್ರೀಮತಿ ವೀಣಾ ಸ್ವಾಗತಿಸಿದರು. ಕಾರ್ಯದರ್ಶಿಯಾದ ಸೌಮ್ಯ ವರದಿ ವಾಚಿಸಿದರು. ವೇಣೂರು ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಧನ್ಯವಾದ ಮಾಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya
error: Content is protected !!