25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಹೊಸಂಗಡಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ, ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಶ್ರೀರಾಮ ದಾಸ ಆಶ್ರನ್ನ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪಡ್ಯಾರ ಬೇಟ್ಟು ಅನುವಂಶಿಯ ಆಡಳಿತದಾರರಾದ ಎ ಜೀವಂದರ್ ಕುಮಾರ್ ರವರು ಸಭಾ ಅಧ್ಯಕ್ಷತೆಯನ್ನು ವಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯ ಉದ್ದೇಶ ಹಾಗೂ ಅದರಿಂದ ಆಗಿರುವಂತಹ ಸಾಮಾಜಿಕ ಬದಲಾವಣೆಯ ಬಗ್ಗೆ ಹಾಗೂ ಪೂಜ್ಯರು ಜನರಿಗೆ ಕೊಟ್ಟಿರುವ ಸಹಕಾರದ ಬಗ್ಗೆ ಮನನ ಮಾಡಿದರು.

ಧಾರ್ಮಿಕ ಉಪನ್ಯಾಸಕಿ ಶ್ರೀಮತಿ ಅನಿತಾ ಶೆಟ್ಟಿ ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಅದರ ಆಚರಣೆಯಿಂದ ಆಗುವ ಬದಲಾವಣೆಯ ಬಗ್ಗೆ ಮಹಿಳೆಯರಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು

ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಆನಂದ ಬಂಗೇರ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ವಸಂತಿ ಹಾಗೂ ಒಕ್ಕೂಟದ ಅಧ್ಯಕ್ಷ ರೋಹಿತ್ ಹಾಗೂ ದಿನಕರ್ ಉಪಸ್ಥಿತರಿದ್ದರು . ಮೇಲ್ವಿಚಾರಕಿ ಶ್ರೀಮತಿ ವೀಣಾ ಸ್ವಾಗತಿಸಿದರು. ಕಾರ್ಯದರ್ಶಿಯಾದ ಸೌಮ್ಯ ವರದಿ ವಾಚಿಸಿದರು. ವೇಣೂರು ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಧನ್ಯವಾದ ಮಾಡಿದರು.

Related posts

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!