23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಹೊಸಂಗಡಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ, ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಶ್ರೀರಾಮ ದಾಸ ಆಶ್ರನ್ನ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪಡ್ಯಾರ ಬೇಟ್ಟು ಅನುವಂಶಿಯ ಆಡಳಿತದಾರರಾದ ಎ ಜೀವಂದರ್ ಕುಮಾರ್ ರವರು ಸಭಾ ಅಧ್ಯಕ್ಷತೆಯನ್ನು ವಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯ ಉದ್ದೇಶ ಹಾಗೂ ಅದರಿಂದ ಆಗಿರುವಂತಹ ಸಾಮಾಜಿಕ ಬದಲಾವಣೆಯ ಬಗ್ಗೆ ಹಾಗೂ ಪೂಜ್ಯರು ಜನರಿಗೆ ಕೊಟ್ಟಿರುವ ಸಹಕಾರದ ಬಗ್ಗೆ ಮನನ ಮಾಡಿದರು.

ಧಾರ್ಮಿಕ ಉಪನ್ಯಾಸಕಿ ಶ್ರೀಮತಿ ಅನಿತಾ ಶೆಟ್ಟಿ ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಅದರ ಆಚರಣೆಯಿಂದ ಆಗುವ ಬದಲಾವಣೆಯ ಬಗ್ಗೆ ಮಹಿಳೆಯರಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು

ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಆನಂದ ಬಂಗೇರ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ವಸಂತಿ ಹಾಗೂ ಒಕ್ಕೂಟದ ಅಧ್ಯಕ್ಷ ರೋಹಿತ್ ಹಾಗೂ ದಿನಕರ್ ಉಪಸ್ಥಿತರಿದ್ದರು . ಮೇಲ್ವಿಚಾರಕಿ ಶ್ರೀಮತಿ ವೀಣಾ ಸ್ವಾಗತಿಸಿದರು. ಕಾರ್ಯದರ್ಶಿಯಾದ ಸೌಮ್ಯ ವರದಿ ವಾಚಿಸಿದರು. ವೇಣೂರು ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಧನ್ಯವಾದ ಮಾಡಿದರು.

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya
error: Content is protected !!