July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2023 ಹಾಗೂ 24 ರ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಹದಿನೇಳು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಬಂದಿದ್ದು, ಒಟ್ಟು ಒಂದು ಲಕ್ಷದ ಎರಡು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya
error: Content is protected !!