September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆಗೈದ ವಂ.ಡಾ. ಆಲ್ವಿನ್ ಸೆರಾವೋ ರವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಸ್ವಾ. ಜೆರೋಮ್ ಡಿ’ಸೋಜ ಅವರು ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರ ಸರಳತೆ, ಮಾನವೀಯ ಗುಣಗಳನ್ನು ಪ್ರಶಂಸಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಸ್ವಾ. ವಾಲ್ಟರ್ ಡಿ’ಮೆಲ್ಲೊ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲ ಸಂತೋಷ್ ಸಲ್ದಾನ, ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ಸಿಸ್ಟೆರ್ ಪ್ರೆಸಿಲ್ಲಾ ಅಂದ್ರಾದೆ, ನಾರಾವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ತುಳುಪುಳೆ, ಸಂತಪಾವ್ಲರ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯಸ್ಥ ರಿಚರ್ಡ್ ಮೋರಸ್, ಸಂತಾಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳಂಜ ಪ್ರಾಂಶುಪಾಲರೊಂದಿಗಿನ ಒಡನಾಟವನ್ನು ಹಂಚಿಕೊಂಡರು. ಪೋಷಕರ ಪರವಾಗಿ ಶ್ರೀರಂಗಮಯ್ಯ ಮಾತನಾಡಿದರು. ಉಪಪ್ರಾಂಶುಪಾಲ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಸೋನಿಯಾ ಡಿ’ಸೋಜಾ ವಂದಿಸಿದರು. ಪದವಿ ಕಾಲೇಜಿನ ಉಪನ್ಯಾಸಕ ಅವಿಲ್ ಮೋರಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಹಕಾರವಿತ್ತರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
error: Content is protected !!