July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆಗೈದ ವಂ.ಡಾ. ಆಲ್ವಿನ್ ಸೆರಾವೋ ರವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಸ್ವಾ. ಜೆರೋಮ್ ಡಿ’ಸೋಜ ಅವರು ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಅವರ ಸರಳತೆ, ಮಾನವೀಯ ಗುಣಗಳನ್ನು ಪ್ರಶಂಸಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಸ್ವಾ. ವಾಲ್ಟರ್ ಡಿ’ಮೆಲ್ಲೊ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲ ಸಂತೋಷ್ ಸಲ್ದಾನ, ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ಸಿಸ್ಟೆರ್ ಪ್ರೆಸಿಲ್ಲಾ ಅಂದ್ರಾದೆ, ನಾರಾವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ತುಳುಪುಳೆ, ಸಂತಪಾವ್ಲರ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯಸ್ಥ ರಿಚರ್ಡ್ ಮೋರಸ್, ಸಂತಾಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳಂಜ ಪ್ರಾಂಶುಪಾಲರೊಂದಿಗಿನ ಒಡನಾಟವನ್ನು ಹಂಚಿಕೊಂಡರು. ಪೋಷಕರ ಪರವಾಗಿ ಶ್ರೀರಂಗಮಯ್ಯ ಮಾತನಾಡಿದರು. ಉಪಪ್ರಾಂಶುಪಾಲ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಸೋನಿಯಾ ಡಿ’ಸೋಜಾ ವಂದಿಸಿದರು. ಪದವಿ ಕಾಲೇಜಿನ ಉಪನ್ಯಾಸಕ ಅವಿಲ್ ಮೋರಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಹಕಾರವಿತ್ತರು.

Related posts

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!