25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಪ್ರಾಪ್ತಿ 10ನೇ , ಅತಿಥಿ ಸ್ಥಾನವನ್ನು ವಿನೀತ್ ಹತ್ತನೇ ಮತ್ತು ಮುಖ್ಯ ಅತಿಥಿ ಸ್ಥಾನವನ್ನು ಸಂಜನ 9ನೇ ತರಗತಿ ಇವರು ವಹಿಸಿಕೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಅಧ್ಯಕ್ಷರು ಮತ್ತು ಅತಿಥಿಗಳು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚೆನ್ನೆಮಣೆ ಆಟವನ್ನು ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ತುಳುನಾಡಿನ ವೈಶಿಷ್ಟ್ಯತೆಗಳನ್ನು ಬಹಳ ಸವಿಸ್ತಾರವಾಗಿ ಎಲ್ಲರ ಮನಮುಟ್ಟುವಂತೆ ಮುಖ್ಯ ಅತಿಥಿಗಳು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ಅತಿಥಿಗಳು ಮತ್ತು ಅಧ್ಯಕ್ಷರು ತಮ್ಮ ಭಾಷಣದ ಮೂಲಕ ಆಟಿಗೆ ಸಂಬಂಧಿಸಿದ ತಮ್ಮ ಅನುಭವಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಯಶ್ವಿತಾ, ಸ್ವಾಗತ ಭಾಷಣವನ್ನು ಪ್ರಶ್ಯ ಮತ್ತು ವಂದನಾರ್ಪಣೆಯನ್ನು ಸ್ಪಂದನ್ ಇವರು ನೆರವೇರಿಸಿದರು.

ಶಾಲಾ ಮಕ್ಕಳಿಂದ ತುಳು ನಾಡಿನ ಸಂಸ್ಕೃತಿಗಳನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ಪರಿಚಯಿಸಿ ಹಂಚಲಾಯಿತು. ಆಟಿಗೆ ಸಂಬಂಧಿಸಿದ ವಿವಿಧ ರೀತಿಯ ಬಿತ್ತಿ ಪತ್ರಿಕೆಗಳನ್ನು ಮಕ್ಕಳಿಂದ ತಯಾರಿಸಲಾಯಿತು. ಚೆನ್ನೆ ಮಣೆ ಆಟವನ್ನು ಪರಿಚಯಿಸಿ ಮಕ್ಕಳಿಂದ ಆಡಿಸಲಾಯಿತು. ಶಾಲಾ ಎಲ್ಲಾ ಮಕ್ಕಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya
error: Content is protected !!