ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಳ್ತಂಗಡಿ ಘಟಕ ಇವುಗಳ ಆಶ್ರಯದಲ್ಲಿ ಜು.31 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕತರ ಉಪನ್ಯಾಸಮಾಲೆ – 3 ಇದರ ಅಡಿಯಲ್ಲಿ ಶಿವರಾಮ ಕಾರಂತರ ಸ್ಮರಣೆ ಕಾರ್ಯಕ್ರಮ ನಡೆಯಿತು.

ಪ್ರಧಾನ ಭಾಷಣಕಾರರಾಗಿ ಎಸ್ ಡಿ ಎಂ ಕಾಲೇಜು ಉಪನ್ಯಾಸಕ ಡಾ. ರಾಜೇಶ್ ಆಗಮಿಸಿ ಕಾರಂತರ ಬದುಕಿನ ವಿವಿಧ ಮಜಲುಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಹಿರಿಯ ಉಪನ್ಯಾಸಕರಾದ ಆನಂದ ಡಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಡಾ. ಗಣೇಶ್ ಭಟ್ ಹಾಗೂ ಡಾ. ಅಮೃತ ರಶ್ಮಿ ಕಾರ್ಯಕ್ರಮ ಸಂಯೋಜಿಸಿದರು. ಮನ್ವಿತಾ ಮತ್ತು ತಂಡದಿಂದ ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಕುಮಾರಿ ರಕ್ಷಾ ನಿರೂಪಿಸಿ, ಕುಮಾರಿ ಸಮಿತ ಸ್ವಾಗತಿಸಿ ಧನುಶ್ರೀ ವಂದನಾರ್ಪಣೆ ಗೈದರು.











