23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು.

ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ 108 ತೆಂಗಿನಕಾಯಿ ಗಣಹೋಮದ ಕೂಪನನ್ನು ಗಣೇಶೋತ್ಸವ ಸಮಿತಿಯ ಗೌರಾವಾಧ್ಯಕ್ಷ ಡಾ| ಶಾಂತಿ ಪ್ರಸಾದ್ ನಮನ ಕ್ಲಿನಿಕ್ ಇವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಫಲ್ಗುಣಿ ಸಂಘದ ಅಧ್ಯಕ್ಷ ವಿ. ಎಸ್ ಜಯರಾಜ್‌ರವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ್ ಪೈ, ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಕಾರ್ಯದರ್ಶಿ ಪ್ರಶಾಂತ್ ಹೆಗ್ಡೆ ಕುಂಟಲ್ಮಾರು ಮತ್ತು ಸುದೀಪ್ ಪಟವರ್ಧನ್, ಕೋಶಾಧಿಕಾರಿ ಶ್ರೀಕಾಂತ್ ಉಡುಪ ಹಾಗೂ ಜಂಟಿ ಸಮಿತಿಗಳ ಎಲ್ಲಾ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ ಮತ್ತು ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ವೇಣೂರಿನ ಎಲ್ಲಾ ವ್ಯಾಪಾರಸ್ಥರು ತಮ್ಮ ಸಂಸ್ಥೆಗಳು, ಮನೆಗಳನ್ನು ವಿಧ್ಯುದ್ದೀಪಾಲಂಕಾರದಿಂದ ವೇಣೂರು ನಗರವನ್ನು ಕಂಗೊಳಿಸಿ 25ನೇ ವರ್ಷದ ಗಣೇಶೋತ್ಸವವನ್ನು ವೇಣೂರಿನ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಯಿತು.

Related posts

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya
error: Content is protected !!