22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು.

ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ 108 ತೆಂಗಿನಕಾಯಿ ಗಣಹೋಮದ ಕೂಪನನ್ನು ಗಣೇಶೋತ್ಸವ ಸಮಿತಿಯ ಗೌರಾವಾಧ್ಯಕ್ಷ ಡಾ| ಶಾಂತಿ ಪ್ರಸಾದ್ ನಮನ ಕ್ಲಿನಿಕ್ ಇವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಫಲ್ಗುಣಿ ಸಂಘದ ಅಧ್ಯಕ್ಷ ವಿ. ಎಸ್ ಜಯರಾಜ್‌ರವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ್ ಪೈ, ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಕಾರ್ಯದರ್ಶಿ ಪ್ರಶಾಂತ್ ಹೆಗ್ಡೆ ಕುಂಟಲ್ಮಾರು ಮತ್ತು ಸುದೀಪ್ ಪಟವರ್ಧನ್, ಕೋಶಾಧಿಕಾರಿ ಶ್ರೀಕಾಂತ್ ಉಡುಪ ಹಾಗೂ ಜಂಟಿ ಸಮಿತಿಗಳ ಎಲ್ಲಾ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ ಮತ್ತು ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ವೇಣೂರಿನ ಎಲ್ಲಾ ವ್ಯಾಪಾರಸ್ಥರು ತಮ್ಮ ಸಂಸ್ಥೆಗಳು, ಮನೆಗಳನ್ನು ವಿಧ್ಯುದ್ದೀಪಾಲಂಕಾರದಿಂದ ವೇಣೂರು ನಗರವನ್ನು ಕಂಗೊಳಿಸಿ 25ನೇ ವರ್ಷದ ಗಣೇಶೋತ್ಸವವನ್ನು ವೇಣೂರಿನ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಯಿತು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!