32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya
error: Content is protected !!