23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!