22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ. 2 ರಂದು ವೇಣೂರು ಗ್ರಾಮ ಪಂಚಾಯತ್ ಹೊಸ ಬಸ್ಸು ತಂಗುದಾಣ ಸಭಾಂಗಣದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸಭೆಯನ್ನು ಮುನ್ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಬಜಿರೆ, ವೇಣೂರು, ಮೂಡುಕೋಡಿ ಮತ್ತು ಕರಿಮಣೇಲು ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿ ಆಗಿದ್ದು ತಾಲೂಕಿನ ಹೋಬಳಿ ಮಟ್ಟದಲ್ಲಿದೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನಗಳನ್ನು ಈ ನಾಲ್ಕು ಗ್ರಾಮಗಳಿಗೆ ಹಂಚಿಕೆ ಮಾಡಿದ್ರೂ ಸಾಕಾಗುವುದಿಲ್ಲ, ಗ್ರಾಮಗಳ ಅಭಿವೃದ್ಧಿಗೆ ಅನುದಾನದ ತೊಡಕಿನಿಂದಾಗಿ ತೊಂದರೆಯಾಗುತ್ತಿದೆ. ಮೂಡಕೋಡಿಯನ್ನು ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದಾಗ ಇದಕ್ಕೆ ಪರ ವಿರೋಧ ಚರ್ಚೆ ನಡೆದು ನಾಲ್ಕು ಗ್ರಾಮಗಳ ಪೈಕಿ ಎರಡು ಗ್ರಾಮಗಳನ್ನು ಒಳಗೊಂಡ ನೂತನ ಗ್ರಾಮ ಪಂಚಾಯತ್ ಮಾಡಬೇಕು ಎಂದು ಸಭೆಯಲ್ಲಿ ಸಾರ್ವಜನಿಕರು ಬಹುಮತದಿಂದ ಒತ್ತಾಯಿಸಿದರು. ಈ ಕುರಿತು ನಿರ್ಣಯಿಸಲಾಯಿತು.

ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಉಮೇಶ್ ಎನ್ ನಡ್ತಿಕಲ್ಲು,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಟೀಲ್ ವರದಿ ಮಂಡಿಸಿದರು. ಕಾರ್ಯದರ್ಶಿ ವನಜಾ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!