25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya
error: Content is protected !!