22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
error: Content is protected !!