23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ.

ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮೀನು ಹಿಡಿಯದಂತೆ ಸರಕಾರ ನಿಷೇಧವನ್ನು ಮಾಡಿದೆ. ಇದರಿಂದಾಗಿ ಈ ಪ್ರದೇಶಕ್ಕೆ ಯಾರೂ ಮೀನು ಹಿಡಿಯಲು ಬರುವುದಿಲ್ಲ. ಆದರೆ ಆ.1 ರಂದು ರಾತ್ರಿ ಸುಮಾರು 10 ಗಂಟೆ ರಾತ್ರಿ ಅನ್ಯಮತೀಯರಿಬ್ಬರು ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದಿದ್ದರು. ರಾತ್ರಿ ನದಿ ಬದಿಯಲ್ಲಿ ಲೈಟ್ ಹಾಕುತ್ತಿರುವುದನ್ನು ಕಂಡ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ಇಬ್ಬರು ಮೀನು ಹಿಡಿಯಲು ಬಂದಿರುವುದು ಕಂಡು ಬಂದಿತ್ತು. ವಿಚಾರಿಸಿದಾಗ ತಾವು ಬಂದಾರು, ಕುಪ್ಪೆಟ್ಟಿಯಿಂದ ಮೀನು ಹಿಡಿಯಲು ಬಂದಿರುವುದಾಗಿ ತಿಳಿಸಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya
error: Content is protected !!