30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ದೆಹಲಿಯ ಕೆಂಪು ಕೋಟೆಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆತ್ಮ ನಿರ್ಭರ ಯೋಜನೆ ಯಡಿಯಲ್ಲಿ ಉಜಿರೆ ಉತ್ತಮ ಗ್ರಾಮ ಪಂಚಾಯತ್ ಆಯ್ಕೆ ಯಾಗಿದ್ದು ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನೋಡಲ್ ಅಧಿಕಾರಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಯವರಿಗೆ ಆಮಂತ್ರಣ ಬಂದಿರುತ್ತದೆ.


ಇವರೊಂದಿಗೆ ಅಧ್ಯಕ್ಷ ಪತಿ
ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕೆ ಕರ್ನಾಟಕ ರಾಜ್ಯದಿಂದ 7 ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಸದಸ್ಯರಿಗೆ ಮತ್ತು ಅವರ ಪತಿ/ ಪತ್ನಿಗೆ ಮತ್ತು ಇಬ್ಬರು ನೋಡಲ್ ಅಧಿಕಾರಿಗಳಿಗೆ ವಿಶೇಷ ಅತಿಥಿಗಳಾಗಿ ಭಾಗವಹಿಸುವ ಅವಕಾಶವಿದ್ದು
ಅಧ್ಯಕ್ಷರು/ಸದಸ್ಯರುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕಾರ್ಯಕ್ರಮದ ನಂತರ ವಾಪಸ್ ಕರೆತರಲು ರಾಜ್ಯ ದಿಂದ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮತ್ತು ಕೊಡಗು ಜಿಲ್ಲೆಯ ಹುದೇರಿ ಗ್ರಾಮ ಪಂಚಾಯತ್ ಅಭಿನಂದನೆಗಳು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಇವರುಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದಿಂದ ಒಟ್ಟು 17 ಮಂದಿ ಭಾಗವಸುವರು

Related posts

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya
error: Content is protected !!