July 23, 2026
ಆಯ್ಕೆ

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ದೆಹಲಿಯ ಕೆಂಪು ಕೋಟೆಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆತ್ಮ ನಿರ್ಭರ ಯೋಜನೆ ಯಡಿಯಲ್ಲಿ ಉಜಿರೆ ಉತ್ತಮ ಗ್ರಾಮ ಪಂಚಾಯತ್ ಆಯ್ಕೆ ಯಾಗಿದ್ದು ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನೋಡಲ್ ಅಧಿಕಾರಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಯವರಿಗೆ ಆಮಂತ್ರಣ ಬಂದಿರುತ್ತದೆ.


ಇವರೊಂದಿಗೆ ಅಧ್ಯಕ್ಷ ಪತಿ
ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕೆ ಕರ್ನಾಟಕ ರಾಜ್ಯದಿಂದ 7 ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಸದಸ್ಯರಿಗೆ ಮತ್ತು ಅವರ ಪತಿ/ ಪತ್ನಿಗೆ ಮತ್ತು ಇಬ್ಬರು ನೋಡಲ್ ಅಧಿಕಾರಿಗಳಿಗೆ ವಿಶೇಷ ಅತಿಥಿಗಳಾಗಿ ಭಾಗವಹಿಸುವ ಅವಕಾಶವಿದ್ದು
ಅಧ್ಯಕ್ಷರು/ಸದಸ್ಯರುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕಾರ್ಯಕ್ರಮದ ನಂತರ ವಾಪಸ್ ಕರೆತರಲು ರಾಜ್ಯ ದಿಂದ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮತ್ತು ಕೊಡಗು ಜಿಲ್ಲೆಯ ಹುದೇರಿ ಗ್ರಾಮ ಪಂಚಾಯತ್ ಅಭಿನಂದನೆಗಳು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಇವರುಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದಿಂದ ಒಟ್ಟು 17 ಮಂದಿ ಭಾಗವಸುವರು

Related posts

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!