September 6, 2026
ಆಯ್ಕೆ

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ದೆಹಲಿಯ ಕೆಂಪು ಕೋಟೆಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆತ್ಮ ನಿರ್ಭರ ಯೋಜನೆ ಯಡಿಯಲ್ಲಿ ಉಜಿರೆ ಉತ್ತಮ ಗ್ರಾಮ ಪಂಚಾಯತ್ ಆಯ್ಕೆ ಯಾಗಿದ್ದು ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನೋಡಲ್ ಅಧಿಕಾರಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಯವರಿಗೆ ಆಮಂತ್ರಣ ಬಂದಿರುತ್ತದೆ.


ಇವರೊಂದಿಗೆ ಅಧ್ಯಕ್ಷ ಪತಿ
ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕೆ ಕರ್ನಾಟಕ ರಾಜ್ಯದಿಂದ 7 ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಸದಸ್ಯರಿಗೆ ಮತ್ತು ಅವರ ಪತಿ/ ಪತ್ನಿಗೆ ಮತ್ತು ಇಬ್ಬರು ನೋಡಲ್ ಅಧಿಕಾರಿಗಳಿಗೆ ವಿಶೇಷ ಅತಿಥಿಗಳಾಗಿ ಭಾಗವಹಿಸುವ ಅವಕಾಶವಿದ್ದು
ಅಧ್ಯಕ್ಷರು/ಸದಸ್ಯರುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕಾರ್ಯಕ್ರಮದ ನಂತರ ವಾಪಸ್ ಕರೆತರಲು ರಾಜ್ಯ ದಿಂದ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮತ್ತು ಕೊಡಗು ಜಿಲ್ಲೆಯ ಹುದೇರಿ ಗ್ರಾಮ ಪಂಚಾಯತ್ ಅಭಿನಂದನೆಗಳು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಇವರುಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದಿಂದ ಒಟ್ಟು 17 ಮಂದಿ ಭಾಗವಸುವರು

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya
error: Content is protected !!