25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

ಬೆಳ್ತಂಗಡಿ: ತುಳುವರ ಸಂಸ್ಕ್ರತಿ ಆಚಾರ ವಿಚಾರ, ಆಹಾರ ಪದ್ದತಿ ವಿಭಿನ್ನವಾದದ್ದು, ತುಳು ಭಾಷೆ ಉಳಿದರೆ ಮಾತ್ರ ಇದೆಲ್ಲ ಉಳಿಯಲು ಸಾಧ್ಯ ಆದ್ದರಿಂದ ಈ ಕಾಲಘಟ್ಟದಲ್ಲಿ ತುಳು ನಾಡಿನ ತುಳು ಭಾಷೆಯ ಮಹತ್ವವನ್ನು ಯುವ ಜನರಿಗೆ ತಿಳಿಸುವ ಅವಶ್ಯಕತೆ ಹಿರಿಯರಾದ ನಮಗಿದೆ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಅಭಿಪ್ರಾಯ ಪಟ್ಟರು.

ಅವರು ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟ ವತಿಯಿಂದ ಆ.3 ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿದತ್ತವಾದ ಆಹಾರಗಳನ್ನು ನಮ್ಮ ಹಿರಿಯರು ಸೇವಿಸುತ್ತಿದ್ದುದರಿಂದ ಯಾವುದೇ ರೋಗವಿಲ್ಲದೇ ಹಲವಾರೂ ವರ್ಷ ನೆಮ್ಮದಿಯಿಂದ ಬಾಳಿ ಬದುಕುತಿದ್ದರು. ಆದರೆ ಬದಲಾದ ಈಗಿನ ಕಾಲಘಟ್ಟದಲ್ಲಿ ಆಹಾರದೊಟ್ಟಿಗೆ ವಿಷವನ್ನು ಸೇವಿಸುವ ಅನೀವಾರ್ಯ ಸ್ಥಿತಿಗೆ ನಾವು ಬಂದ್ದು ತಲುಪಿದ್ದೇವೆ. ಅದ್ದರಿಂದಲೇ ರೋಗದೊಂದಿಗೆ ನಾವು ಬದುಕುವಂತಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಜಿರೆ ಸ.ಹಿರಿಯ.ಪ್ರಾಥಮಿಕ ಶಾಲೆಯ ಶಿಕ್ಷಕ ಕೂಸಪ್ಪ ಗೌಡ ಮಾತನಾಡಿ, ತುಳುನಾಡಿನ ಆಹಾರ ಪದ್ಧತಿ, ನಮ್ಮ ಹಿರಿಯರು ಬದುಕುತಿದ್ದ ಶಿಸ್ತು ಬದ್ಧ ಜೀವನದ ಬಗ್ಗೆ ಮಾಹಿತಿ ನೀಡಿದ ಅವರು ಯುವಜನತೆ ಮೊಬೈಲ್ ದಾಸರಾಗುತ್ತಿರುವುದು ದುರಂತ, ನಾವೆಲ್ಲರೂ ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಕೆಲಸ ಚಿಕ್ಕಂದಿನಿಂದಲೇ ಮಾಡಬೇಕು. ಟಿ.ವಿ. ಮೊಬೈಲ್ ಹೆಚ್ಚು ನೋಡದಂತೆ ಜಾಗ್ರತೆ ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕೂಟಗಳ ಪರವಾಗಿ ಶ್ರೀಮತಿ ಹೇಮಾವತಿ ಹಾಗೂ ಶ್ರೀಮತಿ ಕಸ್ತೂರಿ ಉಪಸ್ಥಿತರಿದ್ದರು. ಯಂಗ್ ಚಾಲೆಂಜರ್ಸ್ ಉಪಾಧ್ಯಕ್ಷ ವಿಜಯ ಕುಮಾರ್ ಸ್ವಾಗತಿಸಿ ಕೋಶಾಧಿಕಾರಿ ಸಾಂತಪ್ಪ ಧನ್ಯವಾದವಿತ್ತರು.

ಯಂಗ್ ಚಾಲೆಂಜರ್ಸ್ ಸಂಚಾಲಕ ನಾಮದೇವ ರಾವ್ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya
error: Content is protected !!