Uncategorized

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

ಬೆಳ್ತಂಗಡಿ: ತುಳುವರ ಸಂಸ್ಕ್ರತಿ ಆಚಾರ ವಿಚಾರ, ಆಹಾರ ಪದ್ದತಿ ವಿಭಿನ್ನವಾದದ್ದು, ತುಳು ಭಾಷೆ ಉಳಿದರೆ ಮಾತ್ರ ಇದೆಲ್ಲ ಉಳಿಯಲು ಸಾಧ್ಯ ಆದ್ದರಿಂದ ಈ ಕಾಲಘಟ್ಟದಲ್ಲಿ ತುಳು ನಾಡಿನ ತುಳು ಭಾಷೆಯ ಮಹತ್ವವನ್ನು ಯುವ ಜನರಿಗೆ ತಿಳಿಸುವ ಅವಶ್ಯಕತೆ ಹಿರಿಯರಾದ ನಮಗಿದೆ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಅಭಿಪ್ರಾಯ ಪಟ್ಟರು.

ಅವರು ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟ ವತಿಯಿಂದ ಆ.3 ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿದತ್ತವಾದ ಆಹಾರಗಳನ್ನು ನಮ್ಮ ಹಿರಿಯರು ಸೇವಿಸುತ್ತಿದ್ದುದರಿಂದ ಯಾವುದೇ ರೋಗವಿಲ್ಲದೇ ಹಲವಾರೂ ವರ್ಷ ನೆಮ್ಮದಿಯಿಂದ ಬಾಳಿ ಬದುಕುತಿದ್ದರು. ಆದರೆ ಬದಲಾದ ಈಗಿನ ಕಾಲಘಟ್ಟದಲ್ಲಿ ಆಹಾರದೊಟ್ಟಿಗೆ ವಿಷವನ್ನು ಸೇವಿಸುವ ಅನೀವಾರ್ಯ ಸ್ಥಿತಿಗೆ ನಾವು ಬಂದ್ದು ತಲುಪಿದ್ದೇವೆ. ಅದ್ದರಿಂದಲೇ ರೋಗದೊಂದಿಗೆ ನಾವು ಬದುಕುವಂತಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಜಿರೆ ಸ.ಹಿರಿಯ.ಪ್ರಾಥಮಿಕ ಶಾಲೆಯ ಶಿಕ್ಷಕ ಕೂಸಪ್ಪ ಗೌಡ ಮಾತನಾಡಿ, ತುಳುನಾಡಿನ ಆಹಾರ ಪದ್ಧತಿ, ನಮ್ಮ ಹಿರಿಯರು ಬದುಕುತಿದ್ದ ಶಿಸ್ತು ಬದ್ಧ ಜೀವನದ ಬಗ್ಗೆ ಮಾಹಿತಿ ನೀಡಿದ ಅವರು ಯುವಜನತೆ ಮೊಬೈಲ್ ದಾಸರಾಗುತ್ತಿರುವುದು ದುರಂತ, ನಾವೆಲ್ಲರೂ ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಕೆಲಸ ಚಿಕ್ಕಂದಿನಿಂದಲೇ ಮಾಡಬೇಕು. ಟಿ.ವಿ. ಮೊಬೈಲ್ ಹೆಚ್ಚು ನೋಡದಂತೆ ಜಾಗ್ರತೆ ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕೂಟಗಳ ಪರವಾಗಿ ಶ್ರೀಮತಿ ಹೇಮಾವತಿ ಹಾಗೂ ಶ್ರೀಮತಿ ಕಸ್ತೂರಿ ಉಪಸ್ಥಿತರಿದ್ದರು. ಯಂಗ್ ಚಾಲೆಂಜರ್ಸ್ ಉಪಾಧ್ಯಕ್ಷ ವಿಜಯ ಕುಮಾರ್ ಸ್ವಾಗತಿಸಿ ಕೋಶಾಧಿಕಾರಿ ಸಾಂತಪ್ಪ ಧನ್ಯವಾದವಿತ್ತರು.

ಯಂಗ್ ಚಾಲೆಂಜರ್ಸ್ ಸಂಚಾಲಕ ನಾಮದೇವ ರಾವ್ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
error: Content is protected !!