24.6 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿ

ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ

ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ – ಮುಗೇರಡ್ಕ -ಮೊಗ್ರು,
ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ ನೆರವೇರಿತು, ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಗೌರವಾಧ್ಯಕ್ಷರಾದ ಉದಯ ಭಟ್ ಸಭಾಧ್ಯಕ್ಷತೆ ವಹಿಸಿದ್ದರು,ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನಾವು ವಿವಿಧ ರೀತಿಯ ಪರ್ಯಾಯ ಕೃಷಿಯನ್ನು ಅಳವಡಿಸಿಕೊಂಡಿದ್ದರು ಸಹ ನಮ್ಮ ಪರಿಸರಕ್ಕೆ ಸೂಕ್ತವಾದದ್ದು ಭತ್ತದ ಕೃಷಿ ಅದನ್ನು ಮತ್ತಷ್ಟು ಪ್ರೋತ್ಸಾಹಿಸಿ ಉಳಿಸಿ ಬೆಳೆಸಬೇಕೆಂದರು,ಮುಖ್ಯ ಅತಿಥಿಗಳಾದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಮೋಹನ್ ಕುಮಾರ್ ರವರು ಮಾತನಾಡಿ ಶ್ರೀರಾಮ ಶಿಶುಮಂದಿರದಲ್ಲಿ ವಿದ್ಯೆ ಕಲಿಯುತ್ತಿರುವ ಚಿಣ್ಣರ ಅನ್ನದಾಸೋಹಕ್ಕಾಗಿ ಮಾಡುತ್ತಿರುವ ಈ ಕಾರ್ಯ ಶ್ಲಾಘನೀಯವೆಂದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಮಡoತ್ಯಾರು ಶ್ರೀ ದುರ್ಗಾ ಇಂಡಸ್ಟ್ರೀಸ್ ಲ. ಉಮೇಶ್ ಶೆಟ್ಟಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯ ಮೇಲ್ವಿಚಾರಕರಾದ ಕು.
ಶಿಲ್ಪಾ, ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ,ಪ್ರಗತಿಪರ ಕೃಷಿಕರಾದ ಚಂದ್ರಹಾಸ ಗೌಡ ದೇವಸ್ಯ, ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ, ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್.ಎನ್ ಉಪಸ್ಥಿತರಿದ್ದರು.ಗದ್ದೆ ನೀಡಿದವರು ಶ್ರೀ ಕ್ಷೇತ್ರ ಮುಗೇರಡ್ಕ, ಶ್ರೀ ಜಿನ್ನಪ್ಪ ಗೌಡ ಗೌಡತ್ತಿಗೆ, ಶ್ರೀಮತಿ ಉಮಾವತಿ ಗೌಡ ಗೌಡತ್ತಿಗೆ, ಭೋಜನದ ವ್ಯವಸ್ಥೆ ಶ್ರೀ ಮನೋಹರ ಅಂತರ – ಮುಗೇರಡ್ಕ, ಸಹಕಾರ ಕೊರಗಪ್ಪ ಕೊಳಬ್ಬೆ, ನೇಜಿ ನೀಡಿದವರು ಧನ್ವಿತ್ ಪ್ರಶಾಂತ್ ಗೌಡ ಉರುoಬುತ್ತಿಮಾರ್ ಪದ್ಮುಂಜ ಇವರುಗಳು ಸಹಕರಿಸಿದರು. ಭರತೇಶ್ ಪಿ. ಪುಣ್ಕೆದಡಿ ನಿರೂಪಿಸಿ, ಶಿಶುಮಂದಿರ ಮಾತಾಜಿ ಪುಷ್ಪಲತಾ ಕಾರ್ಯಕ್ರಮ ಸ್ವಾಗತಿಸಿ,ಬಾಲಕೃಷ್ಣ ಗೌಡ ಮುಗೇರಡ್ಕ ಧನ್ಯವಾದವಿತ್ತರು.ಟ್ರಸ್ಟ್ ನಾ ಪದಾಧಿಕಾರಿಗಳು, ಮಾತೃ ಮಂಡಳಿ, ಶಿಶು ಮಂದಿರ ಮಾತಾಜಿಯವರು,ಮಕ್ಕಳ ಪೋಷಕ ವೃಂದ, ಊರ -ಪರವೂರ ವಿದ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಕೈ ಜೋಡಿಸಿದರು. ಮಕ್ಕಳ ಕೈಯಲ್ಲಿದೆ ನೇಜಿ ನಡೆಸಿದ್ದು ವಿಶೇಷವಾಗಿತ್ತು.

Related posts

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya
error: Content is protected !!