23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

ಮಂಗಳೂರು : ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ನಿವೃತ್ತ ನೌಕರರ ಹಲವಾರು ಹಕ್ಕುಗಳು ತೀವ್ರ ಉಲ್ಲಂಘನೆಯ ಸ್ಥಿತಿಗೆ ತಲುಪಿರುವುದರಿಂದ, ಆ. 5ರಂದು ಜಂಟಿ ಕ್ರೀಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಬಾಹ್ಯ ಬೆಂಬಲ ನೀಡುತ್ತಿದೆ.

ಸಂಘಟನೆಯ ದೃಷ್ಟಿಯಲ್ಲಿ ವೇತನ ಪರಿಷ್ಕರಣೆ, ಹಿಂಬಾಕಿ ಬಾಕಿ ಹಣದ ಪಾವತಿ, ಅನುಚಿತ ಶಿಸ್ತು ಕ್ರಮಗಳ ವಿರೋಧ, ಗುತ್ತಿಗೆ ನೇಮಕಾತಿಗಳ ರದ್ದುಪಡಿಸುವುದು ಹಾಗೂ ಭ್ರಷ್ಟಾಚಾರದ ವಿರುದ್ಧ ಕ್ರಮಗಳೆಲ್ಲ ಅತೀ ತುರ್ತು ಹಾಗೂ ನ್ಯಾಯಸಮ್ಮತ ಬೇಡಿಕೆಗಳಾಗಿವೆ. ಈ ಬೇಡಿಕೆಗಳು ಕೇವಲ ಕಾರ್ಮಿಕರ ಅಭಿವೃದ್ದಿಗೆ ಮಾತ್ರವಲ್ಲದೆ ನಿಗಮಗಳ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟಕ್ಕೂ ಅತ್ಯಂತ ಅಗತ್ಯವಾಗಿವೆ. ಭಾರತೀಯ ಮಜ್ದೂರು ಸಂಘವು ಯಾವಾಗಲೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಕಾರ್ಮಿಕರೊಂದಿಗೆ ನಿಂತಿದೆ. ಕಾರ್ಮಿಕರ ಹಿತಾಸಕ್ತಿಯೇ ನಮ್ಮ ಹೋರಾಟದ ನೇರ ಉದ್ದೇಶ. ಸರ್ಕಾರವು ತಕ್ಷಣ ಸ್ಪಂದಿಸಿ ಈ ಬೇಡಿಕೆಗಳನ್ನು ಈಡೇರಿಸಬೇಕೆಂಬುದಾಗಿ ನಾವು ಒತ್ತಾಯಿಸುತ್ತೇವೆ. ಆಗಸ್ಟ್ 5ರ ಪ್ರತಿಭಟನೆ ನೌಕರರ ಧ್ವನಿ, ನೌಕರರ ಆತ್ಮವಿಲ್ಲದ ಸ್ಥಿತಿಗೆ ವಿರೋಧದ ಘೋಷಣೆಯಾಗಲಿದೆ. ಎಲ್ಲ ರಾಜ್ಯ ಸರ್ಕಾರಿ ಸಾರಿಗೆ ನೌಕರರ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಈ ಹೋರಾಟದ ಜೊತೆಗೆ ನಮ್ಮ ಧ್ವನಿ ಕೂಡ ಶಕ್ತಿಯಾಗಿ ನಿಲ್ಲಲಿದೆ. ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಹೇಳಿದರು.

Related posts

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!