July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

ಮಂಗಳೂರು : ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ನಿವೃತ್ತ ನೌಕರರ ಹಲವಾರು ಹಕ್ಕುಗಳು ತೀವ್ರ ಉಲ್ಲಂಘನೆಯ ಸ್ಥಿತಿಗೆ ತಲುಪಿರುವುದರಿಂದ, ಆ. 5ರಂದು ಜಂಟಿ ಕ್ರೀಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಬಾಹ್ಯ ಬೆಂಬಲ ನೀಡುತ್ತಿದೆ.

ಸಂಘಟನೆಯ ದೃಷ್ಟಿಯಲ್ಲಿ ವೇತನ ಪರಿಷ್ಕರಣೆ, ಹಿಂಬಾಕಿ ಬಾಕಿ ಹಣದ ಪಾವತಿ, ಅನುಚಿತ ಶಿಸ್ತು ಕ್ರಮಗಳ ವಿರೋಧ, ಗುತ್ತಿಗೆ ನೇಮಕಾತಿಗಳ ರದ್ದುಪಡಿಸುವುದು ಹಾಗೂ ಭ್ರಷ್ಟಾಚಾರದ ವಿರುದ್ಧ ಕ್ರಮಗಳೆಲ್ಲ ಅತೀ ತುರ್ತು ಹಾಗೂ ನ್ಯಾಯಸಮ್ಮತ ಬೇಡಿಕೆಗಳಾಗಿವೆ. ಈ ಬೇಡಿಕೆಗಳು ಕೇವಲ ಕಾರ್ಮಿಕರ ಅಭಿವೃದ್ದಿಗೆ ಮಾತ್ರವಲ್ಲದೆ ನಿಗಮಗಳ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟಕ್ಕೂ ಅತ್ಯಂತ ಅಗತ್ಯವಾಗಿವೆ. ಭಾರತೀಯ ಮಜ್ದೂರು ಸಂಘವು ಯಾವಾಗಲೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಕಾರ್ಮಿಕರೊಂದಿಗೆ ನಿಂತಿದೆ. ಕಾರ್ಮಿಕರ ಹಿತಾಸಕ್ತಿಯೇ ನಮ್ಮ ಹೋರಾಟದ ನೇರ ಉದ್ದೇಶ. ಸರ್ಕಾರವು ತಕ್ಷಣ ಸ್ಪಂದಿಸಿ ಈ ಬೇಡಿಕೆಗಳನ್ನು ಈಡೇರಿಸಬೇಕೆಂಬುದಾಗಿ ನಾವು ಒತ್ತಾಯಿಸುತ್ತೇವೆ. ಆಗಸ್ಟ್ 5ರ ಪ್ರತಿಭಟನೆ ನೌಕರರ ಧ್ವನಿ, ನೌಕರರ ಆತ್ಮವಿಲ್ಲದ ಸ್ಥಿತಿಗೆ ವಿರೋಧದ ಘೋಷಣೆಯಾಗಲಿದೆ. ಎಲ್ಲ ರಾಜ್ಯ ಸರ್ಕಾರಿ ಸಾರಿಗೆ ನೌಕರರ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಈ ಹೋರಾಟದ ಜೊತೆಗೆ ನಮ್ಮ ಧ್ವನಿ ಕೂಡ ಶಕ್ತಿಯಾಗಿ ನಿಲ್ಲಲಿದೆ. ಎಂದು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಹೇಳಿದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!