30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

ಬೆಳ್ತಂಗಡಿ: ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ 2025 ಅನ್ನು ಆ. 3ರಂದು ಬೆಂಗಳೂರಿನ ಯಲಚೆನಹಳ್ಳಿ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅಂತರ್ ಶಾಲಾ ಸ್ಪರ್ಧೆಯು ಆಯೋಜಿಸಲಾಯಿತು.

ಈ ಸ್ಪರ್ಧೆಯಲ್ಲಿ, ಮಿತ್ತಬಾಗಿಲು ಗ್ರಾಮದ, ಆಚಾರಿಬೆಟ್ಟು ಮನೆಯ “ಶ್ರೀಯುವ ಟಿಲ್ಲರ್ ಡೀಕಯ್ಯ ಗೌಡ”ರ ಮೊಮ್ಮಕ್ಕಳಾದ, ಬೆಂಗಳೂರು ನಗರದಲ್ಲಿ ವಾಸವಾಗಿರುವ ವಿನಯಚಂದ್ರ ರವರ ಅವಳಿ ಮಕ್ಕಳಾದ “ಎ. ವಿಭಾಷ್ ವಿನಯಚಂದ್ರ” ಮತ್ತು “ಎ. ವಿಭಾ ವಿನಯಚಂದ್ರ” ಅವರು ಪ್ರಭಾವಶಾಲಿ ಪ್ರದರ್ಶನ ನೀಡಿದ್ದು, ತಲಾ ಎರಡು ಪದಕ ಮತ್ತು ಟ್ರೋಪಿಗಳನ್ನು ಗೆಲ್ಲುವ ಮೂಲಕ ಟೂರ್ನಮೆಂಟ್ ಟ್ರೋಫಿಯನ್ನು ಪಡೆದಿದ್ದಾರೆ. ಇವರಿಗೆ ತರಬೇತಿದಾರರದ ರಾಜೇಂದ್ರ ಬಾಬು ಮತ್ತು ಗೀತಾ ಮಾರ್ಗದರ್ಶನ ನೀಡಿದ್ದಾರೆ.

ವಿಭಾಷ್ ಮತ್ತು ವಿಭಾ ಇಬ್ಬರೂ ಜೆ.ಪಿ.ನಗರದ ಸನ್ ಜುಪಿಟರ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಇವರ ಕರಾಟೆ ಸಾಧನೆಯು ಶಾಲೆಯು ಹಾಗೂ ತರಬೇತಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರವಾಗಿದೆ.

ಇವರ ತಂದೆ ವಿನಯಚಂದ್ರ ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದು, ಅವರು ಮಕ್ಕಳ ಸಾಧನೆಗೆ ಹೆಮ್ಮೆಯ ಅಭಿವ್ಯಕ್ತಿ ನೀಡಿದರು.

ರಾಜ್ಯದ ವಿವಿಧೆಡೆಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆ ಒಕಿನಾವನ್ ಶೈಲಿಯ ಕರಾಟೆಯ ಕೌಶಲ್ಯ ಮತ್ತು ಕ್ರೀಡಾಸ್ಪರ್ಧೆಯ ಉತ್ಸವವಾಗಿತ್ತು. ಸಹೋದರ-ಸಹೋದರಿಯರ ಪ್ರದರ್ಶನವು ಈ ಕೂಟದ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿತು.

Related posts

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya
error: Content is protected !!