ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

ಗುರುವಾಯನಕೆರೆ: ಸಂಸ್ಕೃತಿಯ ಪಾಲನೆಯತ್ತ ಹೊಸ ಬೆಳಕನ್ನು ಹರಡುವ ನಿಟ್ಟಿನಲ್ಲಿ ನಮ್ಮ ವೇದವ್ಯಾಸ ಶಿಶು ಮಂದಿರದ ವತಿಯಿಂದ ಆಟಿದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಂಡಕೋಡಿ, ಪೆರ್ಲ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೇವಂತಿ ಬಿ ಕೆ ಚೆನ್ನೆಮಣೆ ಆಡುವ ಮುಖಾಂತರ ಕಾರ್ಯಕ್ರಮವನ್ನ ಉದ್ಘಾಟಿಸಿ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ನಡೆಯುವ ವಿವಿಧ ಪದ್ಧತಿಯ ಬಗ್ಗೆ ಹಾಗೆ ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಬಗ್ಗೆ ತಿಳಿಸುವ ಮೂಲಕ ಮುಂದಿನ ಮಕ್ಕಳಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದವ್ಯಾಸ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಇಂದುಮತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 28 ಬಗೆಯ ವಿವಿಧ ಖಾದ್ಯಗಳನ್ನು ಪೋಷಕರು ತಯಾರಿಸಿ ತಂದಿದ್ದರು ಹಾಗೆ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನ ಶಿಶು ಮಂದಿರದ ಮಾತಾಜಿಗಳಾದ ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ರಮ್ಯಾ ಹಾಗೂ ಶ್ರೀಮತಿ ಮಂಗಳ ರತ್ನಾಕರ್ ನಡೆಸಿಕೊಟ್ಟರು.

ಮಾತೃ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಸ್ವಾಗತಿಸಿದರು.ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮಿತಾ ಸುಧೀರ್ ವಂದಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
error: Content is protected !!