July 23, 2026
Uncategorized

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4 ರಂದು ತಣ್ಣೀರುಪಂತ ಪ್ಯಾಕ್ಸ್ ನ ಕನಸು ರೈತ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ ಅನೇಕ ವರ್ಷಗಳ ಬಳಿಕ ಸಹಕಾರ ಭಾರತಿ ತಣ್ಣೀರುಪಂತ ಪ್ಯಾಕ್ಸ್ ನ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ. ಚುನಾವಣೆಯಲ್ಲಿ ೧೨ ಅಭ್ಯರ್ಥಿಗಳು ಜಯ ಗಳಿಸಲು ಹಿರಿಯ ಕಾರ್ಯಕರ್ತರ ಬದ್ದತೆ ಹಾಗೂ ಯುವ ಕಾರ್ಯಕರ್ತರು ಅವಿರತ ಪರಿಶ್ರಮಕ್ಕೆ‌ ಅಭಿವಂದನೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ , ಉಪಾಧ್ಯಕ್ಷ ಸುನಿಲ್ ಅಣವು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಚುನಾವಣಾ ಪ್ರಭಾರಿ ಪ್ರವೀಣ್ ರೈ, ತಣ್ಣೀರುಪಂತ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ,ನಿರ್ದೇಶಕರಾದ ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಪ್ರಭಾಕರ್ ಪೊಸೊದೊಂಡಿ, ಜಯಂತಿ ಪಾಲೇದು, ಸರೋಜಿನಿ, ರಜನಿನಾಥ್ ಮುಂದಿಲ, ಸುರೇಶ್ ಹಾಗೂ ಶ್ರೀನಿವಾಸ್, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

ಬೊಮ್ಮಯ್ಯ ವಂದೇ ಮಾತರಂ ಗೀತೆಯನ್ನು ಹಾಡಿದರು.ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಕೇಸರಿ ಶಾಲು ಹೊದಿಸಿ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya
error: Content is protected !!