23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2025-26 ನೇ ಸಾಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ ಪ್ರೌಢಶಾಲಾ, ಕಾಲೇಜು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಆ. 02 ರಂದು ನಡೆಯಿತು.ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಆಯ್ಕೆಯಾದರು.ಶಾಲಾ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಅಯ್ಕೆಗೊಂಡರು. ಅದೇ ರೀತಿ ಉಪಾಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪೀಠೋಪಕರಣ ನೀಡಿ ಸಹಕರಿಸಿದ ಚಂದ್ರ ಶೇಖರ ಇವರಿಗೆ ಗೌರವಿಸಲಾಯಿತು.

ರಷ್ಯಾದಲ್ಲಿ ಎಂ ಬಿ ಬಿ ಎಸ್ ಮಾಡುತ್ತಿರುವ ಶಾಲಾ ಹಳೆ ವಿದ್ಯಾರ್ಥಿ ಪೂಜಿತ್ ಕುಲಾಲ್ ಇವರು ಮಕ್ಕಳಿಗೆ ಮೊಬೈಲ್ ನೀಡದೆ ಅವರ ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪೋಷಕರಿಗೆ ಕಿವಿ ಮಾತು ನೀಡಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಕುಂಭಶ್ರೀಯು ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರ ಸಹಕಾರವೇ ಕಾರಣ ಎಂದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ, ಮಾಜಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಶ್ರೀಮತಿ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ ಸುಮನ್ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ವೇತ ಬಿ ವಂದಿಸಿದರು.

Related posts

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya
error: Content is protected !!